July 23, 2026
ಶಾಲಾ ಕಾಲೇಜು

ವಾಣಿ ಕಾಲೇಜು: ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮ


ಬೆಳ್ತಂಗಡಿ :ನಿರಂತರವಾಗಿ ಕಠಿಣ ಪರಿಶ್ರಮ ಇದ್ದರೆ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಪುತ್ತೂರಿನ ಯುವ ಉದ್ಯಮಿ ಸುಹಾಸ್ ಮರಿಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ನಡೆದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಉದ್ಯಮ ಎಂದರೆ ಒಂದು ತಪಸ್ಸು. ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಛಲದಿಂದ ಸಾಗಿದಾಗ ಅದರಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ. ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲಿನ ಬಗ್ಗೆ ಚಿಂತಿಸದೆ ಗೆಲುವಿನಡೆಗೆ ಧುಮುಕಲು ಪ್ರಯತ್ನಿಸಬೇಕುಎಂದರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಸಂಘದ ಸಂಯೋಜಕರಾದ ಶ್ರೀಮತಿ ಪವಿತ್ರ ಮತ್ತು ಕುಮಾರಿ ಶ್ರಾವ್ಯ ಉಪಸ್ಥಿತರಿದ್ದರು
ವಾಣಿಜ್ಯ ಸಂಘದ ನಾಯಕಿ ಸಿಂಚನ ಸಿ ಎಸ್ ಸ್ವಾಗತಿಸಿದರು. ದೀಪಕ್ ಧನ್ಯವಾದವಿತ್ತರು. ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಹಾರ ಮೇಳ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!