ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya
error: Content is protected !!