25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!