25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!