23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!