25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಶಾಲೆಯಲ್ಲಿ ವಿವಿಧ ಸಂಘಗಳನ್ನು ರಚಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಂಘಗಳ ಅರಿವು ಮತ್ತು ಸಂಘಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗುತ್ತದೆ, ಜೊತೆಗೆ ವಿವಿಧ ಸಂಘಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಂಡಾಗ ಮುಂದಿನ ದಿನಗಳಲ್ಲಿ ಅವುಗಳನ್ನು ಕಾರ್ಯರೂಪಕ್ಕೆ ತರಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ, ಶಾಲೆಯ ಶೈಕ್ಷಣಿಕ ವಿಷಯಗಳಿಗೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಕಾರಗಳನ್ನು ಇನ್ನು ಮುಂದೆಯೂ ನೀಡುವುದಾಗಿ ಎಂದು ತಿಳಿಸಿದರು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲೆಯಲ್ಲಿ ವಿವಿಧ ಸಂಘಗಳನ್ನು ರಚಿಸುವುದರಿಂದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಅಭಿವೃದ್ಧಿಯಾಗುತ್ತದೆ ಮತ್ತು ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಿಗೆ ಇದರ ಅನುಕೂಲಗಳಾಗುತ್ತವೆ ಎಂದು ತಿಳಿಸಿದರು.

ಶಾಲಾ ಶಿಕ್ಷಕಿ ಶ್ರೀಮತಿ ಪುಷ್ಪಲತಾ ರವರು ವಿವಿಧ ಸಂಘಗಳ ಮಹತ್ವ ಮತ್ತು ಉದ್ದೇಶವನ್ನು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಸ್ವಾಗತಿಸಿ.
ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಧನ್ಯವಾದವಿತ್ತರು. ಶಾಲಾ ಶಿಕ್ಷಕ ಗೌರೀಶ್ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya
error: Content is protected !!