23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ.


ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್ ಎಂಬವರು ತನ್ನ ಮನೆಯ ಸಮೀಪ ತೋಟದ ಜಮೀನಿನ ಬಳಿ ಹರಿಯುವ ಫಲ್ಗುಣಿ ನದಿಯಿಂದ ಸುಮಾರು 3-4 ತಿಂಗಳ ಹಿಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿ ತೋಟದಲ್ಲಿ ಸಂಗ್ರಹಿಸಿಟ್ಟುವುದಾಗಿ ವೇಣೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು.

ಈ ಮಾಹಿತಿಯನ್ವಯ ಪೊಲೀಸರು ಜು.9ರಂದು ಮಧ್ಯಾಹ್ನ ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಹೋಗಿ ಪರಿಶೀಲಿಸಿದಾಗ, ತೋಟದ ಬಳಿ ಅಂದಾಜು ಮೌಲ್ಯ ರೂ 1,70,000 ಮೌಲ್ಯದ ಸುಮಾರು 150-170 ಟನ್ ಗಳಷ್ಟು ಮರಳನ್ನು ತೋಟದಲ್ಲಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!