September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

ಉಜಿರೆ: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಕೊಟ್ಟ ಮಹತ್ತ್ವದಷ್ಟು ಬೇರೆ ಯಾವ ಸಂಸ್ಕೃತಿಯು ಕೊಡಲಿಲ್ಲ. ವೇದಗಳು , ರಾಮಾಯಣ , ಮಹಾಭಾರತ ಇತ್ಯಾದಿ ಗ್ರಂಥಗಳು ಮೂಡಿಬರಲು ಕಾರಣ ಭಾರತೀಯರು ಗುರುವಿಗೆ ಕೊಟ್ಟ ಸ್ಥಾನದಿಂದ. ಎಲ್ಲರ ಜೀವನದಲ್ಲೂ ಗುರುವಿನ, ಶಿಕ್ಷಕನ ಪಾತ್ರ ಮಹತ್ವದ್ದಾಗಿರುತ್ತದೆ. ಎಲ್ಲದಕ್ಕಿಂತಲೂ ಎಲ್ಲರಿಗೂ ಅರಿವೇ ಒಂದು ದೊಡ್ಡ ಗುರು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್. ಬಿ. ಇವರು ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಆಯೋಜಿಸಿದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗುರುಪೂರ್ಣಿಮಾ ವಿಷಯವಾಗಿ ರಚಿಸಿದ ಭಿತ್ತಿಪತ್ರಿಕೆಯನ್ನು ಅನಾವರಣ ಮಾಡಿದರು.

ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನಿ ಭಿಡೆ ಹಾಗೂ ಅಂತರಾಧ್ಯಯನ ವೃತ್ತಮ್ ಇದರ ಪ್ರಧಾನ ಸಂಯೋಜಕಿ ಅಂಜನಾ ಇವರ ನೇತೃತ್ವದಲ್ಲಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರ ನೀಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿ , ನಿರೂಪಿಸಿದರು. ಹಂಸಿನಿ ಭಿಡೆ ವಂದಿಸಿದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya
error: Content is protected !!