23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya
error: Content is protected !!