25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya
error: Content is protected !!