25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!