25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!