September 6, 2026
Uncategorized

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅವರ 6 ನೇ ವರ್ಷದ ಚಾರ್ತುಮಾಸ್ಯ ವೃತಾಚರಣೆ ಉತ್ತರ ಕನ್ನಡದ ಕುಮಟಾದ ಕೋನಳ್ಳಿ ಶ್ರೀ ವನದುರ್ಗಾ ದೇವಾಲಯದಲ್ಲಿ ಜು.10 ರಿಂದ ಪ್ರಾರಂಭಗೊಂಡು ಆ.20ರವರೆಗೆ ನಡೆಯಲಿದೆ.

ಚಾತುರ್ಮಾಸ್ಯ ಗುರು ಪೂರ್ಣಮೆಯ ದಿನವಾದ ಇಂದು (ಜು.10 ) ಸಚಿವ ಮಂಕಾಳ್ ಎಸ್. ವೈದ್ಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಚಿವ ಮಧು ಬಂಗಾರಪ್ಪ ವಹಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಸಂಸದರು ಹಾಗೂ ಉಪಸ್ಥಿತರಿದ್ದರು. ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಉದ್ಯಮಿ ಕಿರಣ್ ಕುಮಾರ್ ಮಂಜಿಲ, ವೇಣೂರು ಉದ್ಯಮಿ ರಾಜೇಶ್ ಪೂಜಾರಿ ಮೂಡುಕೋಡಿ, ಬಿಜೆಪಿ ಮುಖಂಡರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಕಣಿಯೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್, ಅಳದಂಗಡಿ ಗ್ರಾ.ಪಂ ಸದಸ್ಯರಾದ ಹರೀಶ್ ಆಚಾರ್ಯ, ರವಿ ಪೂಜಾರಿ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದುಕೊಂಡದರು.

ಬೆಳಿಗ್ಗೆ ವನದುರ್ಗಾ ದೇವಾಲಯದಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ಹಾಗೂ ವೈದಿಕ ವಿಧಿ ವಿಧಾನಗಳು ನೆರವೇರಿತು. ಬಳಿಕ ಕುಮಟಾ ನಾಮಧಾರಿ ಸಭಾಭವನ ಆವರಣದಲ್ಲಿ ವೆಂಕಟರಮಣ ದೇವರಿಗೆ ಪೂಜೆ ಸಲ್ಲಿಸಿ, ಶ್ರೀಗಳ ಪುರಪ್ರವೇಶದ ಮೆರವಣಿಗೆ ಆರಂಭಗೊಂಡು, 11 ಗಂಟೆಗೆ ವನದುರ್ಗಾದೇವಿಗೆ ವಿಶೇಷ ಪೂಜೆ ನಡೆಯಿತು. ಬಳಿಕ ಶ್ರೀಗಳವರ ಗುರುಪೂರ್ಣಿಮೆಯ ವ್ಯಾಸ ಪೀಠದ – ಸದ್ಗುರು ಬ್ರಹ್ಮಾನಂದ ಶ್ರೀ ಪೀಠಾರೋಹಣ, ಗುರು ಪಾದುಕಾ ಪೂಜೆ, ಶ್ರೀಗಳ ಆಶೀರ್ವಚನ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!