37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya
error: Content is protected !!