23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya
error: Content is protected !!