September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya
error: Content is protected !!