September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ವಿಎಚ್‌ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ
ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ನೀಡಿದೆ.


ಎಫ್‌ಐಆರ್ ರದ್ದು ಕೋರಿ ಜಿ.ನವೀನ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಕಡಬ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಎಂ.ಅರುಣ್ ಶ್ಯಾಮ್, “ಪೊಲೀಸರು ಅರ್ಜಿದಾರರ ಅಭಿವ್ಯಕ್ತಿ ಸ್ವಾತಂತ್ರ ಕಸಿದುಕೊಳ್ಳುವ ದುರುದ್ದೇಶದಿಂದ ಅವರ ಮಾತುಗಳಿಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ, ದುರುದ್ದೇಶಪೂರಿತವಾಗಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು,” ಎಂದು ಕೋರಿದರು.

Related posts

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!