30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

ಬೆಳ್ತಂಗಡಿ : ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ಹಾಗೂ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಸ್ವ ಸಹಾಯ ಸಂಘಗಳಿಗೆ ಬ್ಯಾಂಕ್ ಲಿಂಕೇಜ್ ಕಾರ್ಯಕ್ರಮ ಜು.೭ ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.


ತಾಲೂಕಿನ ೯ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ೨೫ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಒಟ್ಟು ರೂ. ೧.೦೩ ಕೋಟಿ ಬ್ಯಾಂಕ್ ಸಾಲ ನೀಡಲಾಯಿತು.


ಕಾರ್ಯಕ್ರಮದಲ್ಲಿ ಎನ್.ಆರ್.ಎಲ್.ಎಮ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಕೃಷಿಯೇತರ ಜೀವನೋಪಾಯ ವ್ಯವಸ್ಥಾಪಕ ನಿತೀಶ್, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ, ಟಿ.ಎಮ್.ಐ.ಎಸ್ ವಿನೋದ್ ಪ್ರಸಾದ್, ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ನಾಯಕ್, ಬ್ಯಾಂಕ್ ಆಫ್ ಬರೋಡಾದ ಆರ್ಥಿಕ ಸೇರ್ಪಡೆ ವಿಭಾಗದ ವ್ಯವಸ್ಥಾಪಕಿ ಡಯಾನಾ, ಆದ್ಯತಾ ವಲಯದ ಉಸ್ತುವಾರಿ ಅಜಯ್, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಸಂಜೀವಿನಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!