25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

ಬೆಳ್ತಂಗಡಿ : ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ಹಾಗೂ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಸ್ವ ಸಹಾಯ ಸಂಘಗಳಿಗೆ ಬ್ಯಾಂಕ್ ಲಿಂಕೇಜ್ ಕಾರ್ಯಕ್ರಮ ಜು.೭ ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.


ತಾಲೂಕಿನ ೯ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ೨೫ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಒಟ್ಟು ರೂ. ೧.೦೩ ಕೋಟಿ ಬ್ಯಾಂಕ್ ಸಾಲ ನೀಡಲಾಯಿತು.


ಕಾರ್ಯಕ್ರಮದಲ್ಲಿ ಎನ್.ಆರ್.ಎಲ್.ಎಮ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಕೃಷಿಯೇತರ ಜೀವನೋಪಾಯ ವ್ಯವಸ್ಥಾಪಕ ನಿತೀಶ್, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ, ಟಿ.ಎಮ್.ಐ.ಎಸ್ ವಿನೋದ್ ಪ್ರಸಾದ್, ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ನಾಯಕ್, ಬ್ಯಾಂಕ್ ಆಫ್ ಬರೋಡಾದ ಆರ್ಥಿಕ ಸೇರ್ಪಡೆ ವಿಭಾಗದ ವ್ಯವಸ್ಥಾಪಕಿ ಡಯಾನಾ, ಆದ್ಯತಾ ವಲಯದ ಉಸ್ತುವಾರಿ ಅಜಯ್, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಸಂಜೀವಿನಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!