23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ.


ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್ ಎಂಬವರು ತನ್ನ ಮನೆಯ ಸಮೀಪ ತೋಟದ ಜಮೀನಿನ ಬಳಿ ಹರಿಯುವ ಫಲ್ಗುಣಿ ನದಿಯಿಂದ ಸುಮಾರು 3-4 ತಿಂಗಳ ಹಿಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿ ತೋಟದಲ್ಲಿ ಸಂಗ್ರಹಿಸಿಟ್ಟುವುದಾಗಿ ವೇಣೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು.

ಈ ಮಾಹಿತಿಯನ್ವಯ ಪೊಲೀಸರು ಜು.9ರಂದು ಮಧ್ಯಾಹ್ನ ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಹೋಗಿ ಪರಿಶೀಲಿಸಿದಾಗ, ತೋಟದ ಬಳಿ ಅಂದಾಜು ಮೌಲ್ಯ ರೂ 1,70,000 ಮೌಲ್ಯದ ಸುಮಾರು 150-170 ಟನ್ ಗಳಷ್ಟು ಮರಳನ್ನು ತೋಟದಲ್ಲಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!