22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ.


ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್ ಎಂಬವರು ತನ್ನ ಮನೆಯ ಸಮೀಪ ತೋಟದ ಜಮೀನಿನ ಬಳಿ ಹರಿಯುವ ಫಲ್ಗುಣಿ ನದಿಯಿಂದ ಸುಮಾರು 3-4 ತಿಂಗಳ ಹಿಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿ ತೋಟದಲ್ಲಿ ಸಂಗ್ರಹಿಸಿಟ್ಟುವುದಾಗಿ ವೇಣೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು.

ಈ ಮಾಹಿತಿಯನ್ವಯ ಪೊಲೀಸರು ಜು.9ರಂದು ಮಧ್ಯಾಹ್ನ ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಹೋಗಿ ಪರಿಶೀಲಿಸಿದಾಗ, ತೋಟದ ಬಳಿ ಅಂದಾಜು ಮೌಲ್ಯ ರೂ 1,70,000 ಮೌಲ್ಯದ ಸುಮಾರು 150-170 ಟನ್ ಗಳಷ್ಟು ಮರಳನ್ನು ತೋಟದಲ್ಲಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!