September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

ಮುಂಡಾಜೆ : ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಹೆತ್ತವರಿಗೆ ನಾವು ಮಕ್ಕಳ ಮುಂದೆ ಯಾವ ರೀತಿಯ ನಡೆದುಕೊಳ್ಳಬೇಕು ಹಾಗೂ ಮಕ್ಕಳನ್ನು ಈ ಆಧುನಿಕ ಯುಗದಲ್ಲಿ ಯಾವ ರೀತಿಯ ಬೆಳೆಸಬೇಕು ಹಾಗೂ ನಮ್ಮ ಮಕ್ಕಳನ್ನು ಪೋಷಕರು ಎಂದು ಇನ್ನೊಬ್ಬರೊಂದಿಗೆ ತುಲನೆ ಮಾಡಬಾರದು ಬದಲಾಗಿ ಹೆತ್ತವರು ತಮ್ಮ ಮಕ್ಕಳನ್ನು ಸಂಪೂರ್ಣವಾಗಿ ಅರ್ಥಯಿಸಿಕೊಂಡು ಅವರ ಇಚ್ಛಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೆರೇಪಿಸಬೇಕು ಎಂಬುದಾಗಿ ತಿಳಿಸಿದರು. ಎಲ್ಲದಕ್ಕೂ ಮಿಗಿಲಾಗಿ ಹೆತ್ತವರು ತಮ್ಮ ಮಕ್ಕಳಿಗೆ ಆದರ್ಶ ವ್ಯಕ್ತಿಯಾಗಬೇಕು ಎಂಬ ಸಲಹೆಯನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲ ಫಾ| ಜಾರ್ಜ್ ಪಿ.ಕೆ , ರವರು ಶಾಲೆಯ ನಿಯಮಗಳನ್ನು ಹೆತ್ತವರಿಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಅಬಾಕಸ್, ಸ್ಕೇಟಿಂಗ್, ಫಿಟ್ ನೆಸ್ ಪಾರ್ಕ್ ನಂತಹ ಶಿಕ್ಷಣಕ್ಕೆ ಸಂಬಂಧಿತ ತರಗತಿಗಳನ್ನು ಪ್ರಾರಂಭಿಸುವುದಾಗಿಯೂ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ CET, NEET, JEE ನಂತಹ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶ ಹೊಂದಿರುವುದಾಗಿಯೂ ಹೇಳಿದರು.

ಸಭೆಯಲ್ಲಿ ಉಮೇಶ್ ಗೌಡ ಅವರನ್ನು ಪೋಷಕರ ಹಾಗೂ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಹಾಗೂ ಶಾಲಾ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಶಾಲಾ ಸಂಚಾಲಕ ಸೆಬಾಸ್ಟಿನ್ ಪಿ ಸಿ ಹಾಗೂ ಫಾ. ಅಬ್ರಹಾಂ ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಪ್ರಿಯ ಸ್ವಾಗತಿಸಿ, ಶಿಕ್ಷಕಿ ಮಾಯ ವಂದಿಸಿದರು. ಶಿಕ್ಷಕಿ ಅನಿಲ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya
error: Content is protected !!