30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಜು.10 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.

ಇಮ್ರಾನ್ ಅಲಿ ಎಂಬಾತ ಸುಮಾರು2 ವರ್ಷಗಳ ಹಿಂದೆ ಖತೀಜ ಕೌಸರ್ ಅವರನ್ನು ಪ್ರೀತಿಸಿ ಮದುವೆಯಾಗಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ತನ್ನ ಪತ್ನಿ ಹಾಗೂ 11 ತಿಂಗಳ ಚಿಕ್ಕ ಮಗುವಿನೊಂದಿಗೆ ವಾಸವಾಗಿದ್ದಾರೆ. ಮದುವೆಯಾದ ಸ್ವಲ್ಪ ಸಮಯದಲ್ಲೇ ಇಮ್ರಾನ್ ಆಲಿ ಅಮಲು ಪದಾರ್ಥ ಸೇವಿಸಿಕೊಂಡು ಬಂದು ವಿನಾಕಾರಣ ಖತೀಜರ ಜೊತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ವೇಣೂರು ಠಾಣೆಗೆ ನೀಡಿದ ದೂರಿನಲ್ಲಿ ಖತೀಜ ಆರೋಪಿಸಿದ್ದಾರೆ. ಜು.8 ರಂದು ಮದ್ಯಾಹ್ನ ಖತೀಜ ಕೌಸರ್‌ರನ್ನು ಕರೆದುಕೊಂಡು ಹೋಗಲು ಅಟೋರಿಕ್ಷಾದಲ್ಲಿ ಅವರ ತಂದೆ ಹಾಗೂ ಮಾವ ಬಂದಿದ್ದು, ಖತೀಜರವರು ಮಗುವಿನೊಂದಿಗೆ ಅಟೋರಿಕ್ಷಾದಲ್ಲಿ ಕುಳಿತಾಗ ಇಮ್ರಾನ್ ಆಕೆಯ ಕೈಯಲ್ಲಿದ್ದ ಮಗುವನ್ನು ಎಳೆದು, ಖತೀಜರವರನ್ನು ಕೈಹಿಡಿದು ಎಳೆದು, ಅವಾಚ್ಯ ಶಬ್ದಗಳಿಂದ ಬೈದು, ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಖತೀಜಾ ಇಮ್ರಾನ್ ಆಲಿ ಇಲ್ಲದ ಸಮಯ ತವರು ಮನೆಗೆ ಬಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಜು.10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!