July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya
error: Content is protected !!