September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ. ವಾಹನಗಳು ಬಂದಾಗ ಅಡ್ಡಾದಿಡ್ಡಿ ಓಡುವುದರಿಂದ ದ್ವಿಚಕ್ರ ಸವಾರರಿಗೆ ಬಹಳಷ್ಟು ಅಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿ ಶಾಲೆಗಳಿಗೆ ನಡೆದುಕೊಂಡು ಹೋಗುವ ಪುಟ್ಟ ಮಕ್ಕಳ ಮೇಲೆರೆಗಳು ನಾಯಿಗಳು ಬರುತ್ತಿದೆ. ಗುಂಪಾಗಿ ಎಂಟರಿಂದ ಹತ್ತು ನಾಯಿಗಳ ಹಿಂಡು ಗುರುವಾಯನಕೆರೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಕಂಡು ಬರುತ್ತಿದೆ. ವಾಹನಗಳು ಬರುವಾಗ ನಾಯಿಗಳ ಹಿಂಡು ಆ ಕಡೆ, ಈ ಕಡೆ ಓಡಾಟ ನಡೆಸುವುದರಿಂದ ವಾಹನ ಅಪಘಾತಗಳು ನಡೆಯುವ ಸಾಧ್ಯತೆಯೂ ಇದೆ. ಯಾವುದೇ ಅಪಾಯ ಆಗುವ ಮೊದಲು ಇದರ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya
error: Content is protected !!