37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ.


ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್ ಎಂಬವರು ತನ್ನ ಮನೆಯ ಸಮೀಪ ತೋಟದ ಜಮೀನಿನ ಬಳಿ ಹರಿಯುವ ಫಲ್ಗುಣಿ ನದಿಯಿಂದ ಸುಮಾರು 3-4 ತಿಂಗಳ ಹಿಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿ ತೋಟದಲ್ಲಿ ಸಂಗ್ರಹಿಸಿಟ್ಟುವುದಾಗಿ ವೇಣೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು.

ಈ ಮಾಹಿತಿಯನ್ವಯ ಪೊಲೀಸರು ಜು.9ರಂದು ಮಧ್ಯಾಹ್ನ ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಹೋಗಿ ಪರಿಶೀಲಿಸಿದಾಗ, ತೋಟದ ಬಳಿ ಅಂದಾಜು ಮೌಲ್ಯ ರೂ 1,70,000 ಮೌಲ್ಯದ ಸುಮಾರು 150-170 ಟನ್ ಗಳಷ್ಟು ಮರಳನ್ನು ತೋಟದಲ್ಲಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!