32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತ್ ಕುಮಾರ್, ಜೀವಶಾಸ್ತ್ರ ಉಪನ್ಯಾಸಕರು, ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿ ಇವರು ವಿದ್ಯಾರ್ಥಿಗಳನದ್ದೇಶಿಸಿ, ‘ಪ್ರತಿಯೊಬ್ಬರೂ ತಾವು ಮಾಡಬೇಕಾದ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ’ ಎಂದರು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಚಂದ್ರ ಇವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.
ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಸ್ವಯಂ ಸೇವಕಿ ನಳಿನಿ ನಿರೂಪಿಸಿ, ಭವಿಷ್ಯ ಧನ್ಯವಾದವಿತ್ತರು.

Related posts

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya
error: Content is protected !!