25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!