July 23, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya
error: Content is protected !!