September 6, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya
error: Content is protected !!