22.7 C
ಪುತ್ತೂರು, ಬೆಳ್ತಂಗಡಿ
August 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಗುರುವಾಯನಕೆರೆ: ಅಂಗಡಿಯ ಬದಿಯಲ್ಲಿ ಜಾಹೀರಾತು ಇರಿಸಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿ ಪರಾರಿಯಾದ ಘಟನೆ ಜು.10 ರಂದು ಬೆಳಗ್ಗಿನ ಜಾವ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 10 ರಂದು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಗುರುವಾಯನಕೆರೆಯಲ್ಲಿರುವ ಸದಕತುಲ್ಲಾ ಎಂಬವರಿಗೆ ಸೇರಿದ ಜಿ.ಕೆ.ಸ್ಟೋರ್ ಹೆಸರಿನ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಬ್ಯಾನರ್ ಗೆ ಜುಲೈ 10 ರಂದು ಬೆಳಗ್ಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ಕಿಡಿಗೇಡಿಯೊರ್ವ ಬೆಂಕಿ ಹಚ್ಚಿದ್ದ ಓಡಿಹೋಗಿದ್ದ. ಈ ಬಗ್ಗೆ ಮಾಲೀಕ ಬೆಳಗ್ಗೆ ಅಂಗಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಸಿಕ್ಯಾಮರ ಪರಿಶೀಲನೆ ನಡೆಸಿದಾಗ ಕೃತ್ಯದ ಸಂಪೂರ್ಣ ದೃಶ್ಯ ಸೆರೆಯಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅಂಗಡಿ ಮಾಲೀಕ ಸದಕತುಲ್ಲಾ ಎಂಬವರು ದೂರು ನೀಡಿದ್ದು. ಪೊಲೀಸರು ಪ್ರಕರಣ ದಾಖಲಿಸಿದ್ದರು.ಬೆಂಕಿ ಹಚ್ಚಿದ ಕಿಡಿಗೇಡಿ ಆರೋಪಿ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಉಮೇಶ್ ಬಂಗೇರ(29) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಜುಲೈ 10 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಹಿಂದೆ ಆರೋಪಿ ಹೊಟೇಲ್ ನಡೆಸುತ್ತಿದ್ದು‌‌. ಇದೆ ಅಂಗಡಿಯಿಂದ 38 ಸಾವಿರದ ದಿನಸಿಗಳನ್ನು ಖರೀದಿಸಿದ ಹಣ ಬಾಕಿ ಇತ್ತು. ಈ ಹಣವನ್ನು ಅಂಗಡಿ ಮಾಲೀಕ ಜುಲೈ 9 ರಂದು ಒಳ್ಳೆಯ ರೀತಿಯಲ್ಲಿ ಕೊಡುವಂತೆ ಕರೆ ಮಾಡಿ ಮನವಿ ಮಾಡಿದ್ದರು.

ಈ ವಿಚಾರದಿಂದ ಕೋಪಗೊಂಡು ಬೆಂಕಿ ಹಚ್ಚಿರುವುದು ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ. ಬೆಂಕಿ ಹಚ್ಚಿದಾಗ ಪಕ್ಕದಲ್ಲಿ ಕಾರು ನಿಲ್ಲಿಸಲಾಗಿದ್ದು ಅದಲ್ಲದೆ ಅಂಗಡಿಗೆ ಬೆಂಕಿ ತಗುಲದೆ ಯಾವುದೇ ದೊಡ್ಡ ಅನಾಹುತ ಉಂಟಾಗಿಲ್ಲ ಎಂದು ಮಾಲೀಕ ಸದಕತುಲ್ಲಾ ಹೇಳಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹಾಗೂ ಸಿಬ್ಬಂದಿ ಮತ್ತು ಮಂಗಳೂರು ಎಫ್ಎಸ್ಎಲ್ ವಿಭಾಗದ ಸೋಕೋ ಸಿಬ್ಬಂದಿ ಅರ್ಪಿತಾ, ಕಾವ್ಯಶ್ರೀ, ಸುಮನ್ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya
error: Content is protected !!