July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

ಧರ್ಮಸ್ಥಳ – ಕಾರ್ಯಾತಡ್ಕ – ಶಿಶಿಲ ರೂಟ್ ಬಸ್ ಹಾಗೂ ಕಾರ್ಯಾತಡ್ಕ – ಶಿಬರಾಜೆ ಪಾದೆ – ಮುದ್ದಿಗೆ -ಕೊಕ್ಕಡ -ಉಪ್ಪಿನಂಗಡಿ -ಪುತ್ತೂರು ಹೊಸದಾಗಿ ರೂಟ್ ಬಸ್ ಪ್ರಾರಂಬಿಸುವಂತೆ ಜು. 11 ರಂದು ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯವರು ಧರ್ಮಸ್ಥಳ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.

ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಅನೇಕ ಉದ್ಯೋಗಸ್ಥರು, ಸಾರ್ವಜನಿಕರು ಪ್ರಯಾಣ ಮಾಡುತ್ತಿದ್ದು ಖಾಸಗಿ ಬಸ್ ಹಾಗೂ ಇನ್ನಿತ್ತರ ವಾಹನಗಳನ್ನು ಅವಲಂಬಿತರಾಗಿದ್ದಾರೆ. ಸದರಿ ಮಾರ್ಗಕ್ಕೆ ಬೆಳಿಗ್ಗೆ ಮತ್ತು ಮದ್ಯಾಹ್ನ ಹಾಗೂ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಕಲ್ಪಿಸಿಕೊಡುವಂತೆ ಈ ಮೂಲಕ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಿ ಟಿ ಸೆಬಾಸ್ಟಿನ್ , ಗ್ರಾಮ ಪಂಚಾಯತ್ ಸದಸ್ಯರಾದ ನಿತ್ಯಾನಂದ ರೈ , ಪ್ರೇಮ ಬಿ ಎಸ್. ಮತ್ತು ಊರ ಪ್ರಮುಖರಾದ ಶ್ರೀಧರ್ ರಾವ್, ಶರತ್ ಮೂಡಾರು, ಅಶೋಕ್ ಭಟ್ ಕಾಯಡ, ಜಯವರ್ಮ ಜೈನ್ ಶಿಬರಾಜೆ, ಕೇಶವ ಗೌಡ ಮಲ್ಲಜಾಲು ಉಪಸ್ಥಿತರಿದ್ದರು.

Related posts

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!