September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

ಧರ್ಮಸ್ಥಳ – ಕಾರ್ಯಾತಡ್ಕ – ಶಿಶಿಲ ರೂಟ್ ಬಸ್ ಹಾಗೂ ಕಾರ್ಯಾತಡ್ಕ – ಶಿಬರಾಜೆ ಪಾದೆ – ಮುದ್ದಿಗೆ -ಕೊಕ್ಕಡ -ಉಪ್ಪಿನಂಗಡಿ -ಪುತ್ತೂರು ಹೊಸದಾಗಿ ರೂಟ್ ಬಸ್ ಪ್ರಾರಂಬಿಸುವಂತೆ ಜು. 11 ರಂದು ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯವರು ಧರ್ಮಸ್ಥಳ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.

ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಅನೇಕ ಉದ್ಯೋಗಸ್ಥರು, ಸಾರ್ವಜನಿಕರು ಪ್ರಯಾಣ ಮಾಡುತ್ತಿದ್ದು ಖಾಸಗಿ ಬಸ್ ಹಾಗೂ ಇನ್ನಿತ್ತರ ವಾಹನಗಳನ್ನು ಅವಲಂಬಿತರಾಗಿದ್ದಾರೆ. ಸದರಿ ಮಾರ್ಗಕ್ಕೆ ಬೆಳಿಗ್ಗೆ ಮತ್ತು ಮದ್ಯಾಹ್ನ ಹಾಗೂ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಕಲ್ಪಿಸಿಕೊಡುವಂತೆ ಈ ಮೂಲಕ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಿ ಟಿ ಸೆಬಾಸ್ಟಿನ್ , ಗ್ರಾಮ ಪಂಚಾಯತ್ ಸದಸ್ಯರಾದ ನಿತ್ಯಾನಂದ ರೈ , ಪ್ರೇಮ ಬಿ ಎಸ್. ಮತ್ತು ಊರ ಪ್ರಮುಖರಾದ ಶ್ರೀಧರ್ ರಾವ್, ಶರತ್ ಮೂಡಾರು, ಅಶೋಕ್ ಭಟ್ ಕಾಯಡ, ಜಯವರ್ಮ ಜೈನ್ ಶಿಬರಾಜೆ, ಕೇಶವ ಗೌಡ ಮಲ್ಲಜಾಲು ಉಪಸ್ಥಿತರಿದ್ದರು.

Related posts

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya
error: Content is protected !!