30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!