25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

ವೇಣೂರು : ಐತಿಹಾಸಿಕ ಮಹತ್ತ್ವದ ವೇಣೂರಿನ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ 25 ವರ್ಷ ತುಂಬುವ ಸಂಭ್ರಮ. ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆಸಿಕೊಂಡು ಬರುತ್ತಿರುವ ಗಣೇಶೋತ್ಸವವನ್ನು ಈ ಬಾರಿ ಇನ್ನಷ್ಟು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ. ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ ಲಾಂಛನವನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅನಾವರಣಗೊಳಿಸಿದರು.

ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ಕೆ.ಶಿವರಾಮ ಹೆಗ್ಡೆ, ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ.ಶಾಂತಿ ಪ್ರಸಾದ್, ಭಾಸ್ಕರ ಪೈ, ಅಧ್ಯಕ್ಷರಾದ ಜಗದೀಶ್ ಡಿ ಕೆ, ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ವಿ ಎಸ್ ಜಯರಾಜ್, ಸದಸ್ಯರಾದ ಪ್ರಸನ್ನ ಹೆಬ್ಬಾರ್, ಶ್ರೀಕಾಂತ ಉಡುಪ ಹೇಮಂತ್ ಕುಮಾರ್, ಅರುಣ್ ಕುಮಾರ್ ಐಂದಲ್ಕೆ, ಸುದತ್ ಜೈನ್,, ಪ್ರಮೋದ್ ಕುಮಾರ್ ಜೈನ್, ಗಂಗಾಧರ ಆಚಾರ್ಯ, ಪ್ರಶಾಂತ ನಾಯಕ್, ಸದಾಶಿವ ಭಂಡಾರಿ, ಪ್ರಕಾಶ್ ಚಂದ್ರ ಹೆಗ್ಡೆ,ನಿರಂಜನ್ ಕೆ ಎಸ್, ಪ್ರಸಾದ ಜೈನ್, ಶ್ರೀ ಸದಾನಂದ ‘ ಬ್ರಹ್ಮ ಶ್ರೀ ‘, ಸೀತಾರಾಮ ಆಚಾರ್ಯ, ಗಿರೀಶ್ ಕೆ ಎಸ್, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮ್ಯಾನೇಜರ್ ಶಾಂತಿ ರಾಜ್ ಜೈನ್ ಹಾಗೂ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕ ಶಿಕ್ಷಕಿಯರು ಪಾಲ್ಗೊಂಡರು.

Related posts

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!