25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

ಉಜಿರೆ: ಪವರ್ ಹೌಸ್ ಬ್ಯಾಟರಿ ಮೂಲಕ ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡಿರುವುದು ಸಂತಸ ತಂದಿದೆ.ಇನ್ನಷ್ಟು ಉದ್ಯಮ ನಡೆಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಹೇಳಿದರು.

ಅವರು ಉಜಿರೆ ವಿಶ್ವಾಸ್ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಹೆಗ್ಡೆ ಮೆಡಿಕಲ್ ಇದರ ಉದ್ಘಾಟನೆಯನ್ನು ಜು.11 ರಂದು ನೇರವೇರಿಸಿ ಮಾತನಾಡಿದರು.

ಇಲ್ಲಿಗೆ ಬರುವ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರಕಿ, ಸಮಾಜದಲ್ಲಿ ಎಲ್ಲರೂ ಲವಲವಿಕೆ, ಸಂತೋಷದಿಂದ ಜೀವನ ನಡೆಸುವಂತಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಚಂದ್ರಕಾಂತ್, ಉಜಿರೆ ಅಮೃತ್ ಟೆಕ್ಸ್ ಟೈಲ್ಸ್ ಮಾಲಕರಾದ ಪ್ರಶಾಂತ್ ಜೈನ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಜಿತ್ ಕುಮಾರ್ ಜೈನ್-ಮಂಜುಳಾ,ಅವನ್ ಸಿದ್ದಕಟ್ಟೆ,ಉಜಿರೆ ಬೆನಕ ಕನಸ್ಟ್ರಕ್ಷನ್ ನ ಗಣೇಶ್, ಉಜಿರೆ ಉದ್ಯಮಿಗಳಾದ ಮೋಹನ್ ಶೆಟ್ಟಿಗಾರ್, ರಾಮಚ್ಚಂದ್ರ ಶೆಟ್ಟಿ, ಹುಕುಂರಾಮ್ ಪಟೇಲ್, ಭರತ್ ಕುಮಾರ್ ಉಜಿರೆ,ಲಕ್ಷ್ಮಣ್ ಸಫಲ್ಯ, ನಿವೃತ್ತ ಪ್ರಾಂಶುಪಾಲರಾದ ಶರತ್ ಕುಮಾರ್,ಗುತ್ತಿಗೆದಾರ ಮಂಜುನಾಥ ಕಾಮತ್,ಪಿಡಿಓ ರಾಘವೇಂದ್ರ ಗೌಡ,ವಿಶ್ವನಾಥ ಶೆಟ್ಟಿ ಮಂಜುಶ್ರೀ,ಪ್ರಿಯಾಂಕ್ ಧರ್ಮಸ್ಥಳ, ಅಕ್ಷಯ್ ಜೈನ್ ಅಳದಂಗಡಿ, ಅಜಯ್ ಎಸ್.ಡಿ.ಎಂ ಆಸ್ಪತ್ರೆ,ಉದ್ಯಮಿ ಶೀತಲ್ ಜೈನ್ ಪವರ್ ಆನ್ ಬೆಳ್ತಂಗಡಿ,ಸಮೃದ್ದ ಶಾಂತಿಸಾಗರ್ ಕನ್ಸ್ಟ್ರಕ್ಷನ್ ಉಜಿರೆ, ಉದ್ಯಮಿ ಪ್ರದೀಪ್ ಜೈನ್ ಶಿರ್ಲಾಲು, ಸುದ್ದಿ ಉದಯ ಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರವೀಣ್ ಗ್ಯಾರೇಜ್ ಉಜಿರೆ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು ಶುಭ ಹಾರೈಸಿದರು.

ಟೀಚರ್ಸ್ ಕೋ ಅಪರೇಟಿವ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು. ಮೆಡಿಕಲ್ ಮಾಲೀಕರಾದ ಜಿತೇಶ್ ಜೈನ್-ಅನ್ವೇಷಾ ಜೈನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!