23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

ಉಜಿರೆ: ಪವರ್ ಹೌಸ್ ಬ್ಯಾಟರಿ ಮೂಲಕ ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡಿರುವುದು ಸಂತಸ ತಂದಿದೆ.ಇನ್ನಷ್ಟು ಉದ್ಯಮ ನಡೆಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಹೇಳಿದರು.

ಅವರು ಉಜಿರೆ ವಿಶ್ವಾಸ್ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಹೆಗ್ಡೆ ಮೆಡಿಕಲ್ ಇದರ ಉದ್ಘಾಟನೆಯನ್ನು ಜು.11 ರಂದು ನೇರವೇರಿಸಿ ಮಾತನಾಡಿದರು.

ಇಲ್ಲಿಗೆ ಬರುವ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರಕಿ, ಸಮಾಜದಲ್ಲಿ ಎಲ್ಲರೂ ಲವಲವಿಕೆ, ಸಂತೋಷದಿಂದ ಜೀವನ ನಡೆಸುವಂತಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಚಂದ್ರಕಾಂತ್, ಉಜಿರೆ ಅಮೃತ್ ಟೆಕ್ಸ್ ಟೈಲ್ಸ್ ಮಾಲಕರಾದ ಪ್ರಶಾಂತ್ ಜೈನ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಜಿತ್ ಕುಮಾರ್ ಜೈನ್-ಮಂಜುಳಾ,ಅವನ್ ಸಿದ್ದಕಟ್ಟೆ,ಉಜಿರೆ ಬೆನಕ ಕನಸ್ಟ್ರಕ್ಷನ್ ನ ಗಣೇಶ್, ಉಜಿರೆ ಉದ್ಯಮಿಗಳಾದ ಮೋಹನ್ ಶೆಟ್ಟಿಗಾರ್, ರಾಮಚ್ಚಂದ್ರ ಶೆಟ್ಟಿ, ಹುಕುಂರಾಮ್ ಪಟೇಲ್, ಭರತ್ ಕುಮಾರ್ ಉಜಿರೆ,ಲಕ್ಷ್ಮಣ್ ಸಫಲ್ಯ, ನಿವೃತ್ತ ಪ್ರಾಂಶುಪಾಲರಾದ ಶರತ್ ಕುಮಾರ್,ಗುತ್ತಿಗೆದಾರ ಮಂಜುನಾಥ ಕಾಮತ್,ಪಿಡಿಓ ರಾಘವೇಂದ್ರ ಗೌಡ,ವಿಶ್ವನಾಥ ಶೆಟ್ಟಿ ಮಂಜುಶ್ರೀ,ಪ್ರಿಯಾಂಕ್ ಧರ್ಮಸ್ಥಳ, ಅಕ್ಷಯ್ ಜೈನ್ ಅಳದಂಗಡಿ, ಅಜಯ್ ಎಸ್.ಡಿ.ಎಂ ಆಸ್ಪತ್ರೆ,ಉದ್ಯಮಿ ಶೀತಲ್ ಜೈನ್ ಪವರ್ ಆನ್ ಬೆಳ್ತಂಗಡಿ,ಸಮೃದ್ದ ಶಾಂತಿಸಾಗರ್ ಕನ್ಸ್ಟ್ರಕ್ಷನ್ ಉಜಿರೆ, ಉದ್ಯಮಿ ಪ್ರದೀಪ್ ಜೈನ್ ಶಿರ್ಲಾಲು, ಸುದ್ದಿ ಉದಯ ಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರವೀಣ್ ಗ್ಯಾರೇಜ್ ಉಜಿರೆ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು ಶುಭ ಹಾರೈಸಿದರು.

ಟೀಚರ್ಸ್ ಕೋ ಅಪರೇಟಿವ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು. ಮೆಡಿಕಲ್ ಮಾಲೀಕರಾದ ಜಿತೇಶ್ ಜೈನ್-ಅನ್ವೇಷಾ ಜೈನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya
error: Content is protected !!