25.5 C
ಪುತ್ತೂರು, ಬೆಳ್ತಂಗಡಿ
August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ ನಡೆಯಿತು.

ಶಾಲಾ ಸಂಸ್ಕೃತ ಶಿಕ್ಷಕ ಹರೀಶ್ ಕುಮಾರ್ ಗುರುಪೂರ್ಣಿಮಾ ದಿನದ ಮಹತ್ವ ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ನಾಯಕ್ ಅವರು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದವ್ಯಾಸರ ಭಾವಚಿತ್ರವಿಟ್ಟು ಮಕ್ಕಳಿಂದ ಆರತಿ ಮಾಡಿಸಿ, ಶಿಕ್ಷಕವೃಂದವು ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮಹಾನ್ ಚೇತನಕ್ಕೆ ಗೌರವ ಸಲ್ಲಿಸಲಾಯಿತು.

ಶಾಲಾ ವಿದ್ಯಾರ್ಥಿ ಅಕ್ಷರ್ ಹಳೆಮನೆಯವರು, ಗುರುವಿನ ಬಗ್ಗೆ “ನನ್ನ ಶಿಲ್ಪಿ” ಎಂಬ ಶೀರ್ಷಿಕೆಯ ಸ್ವ ರಚಿತ ಕವನ ವಾಚಿಸಿ, ಗುರು ನಮನ ಸಲ್ಲಿಸಿದರು. ತೌಫೀರ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya
error: Content is protected !!