24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
error: Content is protected !!