22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya
error: Content is protected !!