
ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ನದಿಗಳಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ಭೋರ್ಗರೆದು ಹರಿಯುತ್ತಿದೆ. ಈ ಮಳೆಗಾಲದಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿರುವುದು ಮೊದಲು ಎಂದು ಸ್ಥಳೀಯರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.
ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳಲ್ಲಿ ಮಳೆ ನೀರು ಹಳ್ಳ ರೀತಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಟ್ಟಿನಲ್ಲಿ ಪುನರ್ವಸು ಅವಂತಾರ ಸೃಷ್ಟಿಸುತ್ತಾ ಎಂಬ ಭೀತಿ ಜನರಲ್ಲಿ ಮೂಡಿದೆ.











