24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

ಧರ್ಮಸ್ಥಳ – ಕಾರ್ಯಾತಡ್ಕ – ಶಿಶಿಲ ರೂಟ್ ಬಸ್ ಹಾಗೂ ಕಾರ್ಯಾತಡ್ಕ – ಶಿಬರಾಜೆ ಪಾದೆ – ಮುದ್ದಿಗೆ -ಕೊಕ್ಕಡ -ಉಪ್ಪಿನಂಗಡಿ -ಪುತ್ತೂರು ಹೊಸದಾಗಿ ರೂಟ್ ಬಸ್ ಪ್ರಾರಂಬಿಸುವಂತೆ ಜು. 11 ರಂದು ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯವರು ಧರ್ಮಸ್ಥಳ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.

ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಅನೇಕ ಉದ್ಯೋಗಸ್ಥರು, ಸಾರ್ವಜನಿಕರು ಪ್ರಯಾಣ ಮಾಡುತ್ತಿದ್ದು ಖಾಸಗಿ ಬಸ್ ಹಾಗೂ ಇನ್ನಿತ್ತರ ವಾಹನಗಳನ್ನು ಅವಲಂಬಿತರಾಗಿದ್ದಾರೆ. ಸದರಿ ಮಾರ್ಗಕ್ಕೆ ಬೆಳಿಗ್ಗೆ ಮತ್ತು ಮದ್ಯಾಹ್ನ ಹಾಗೂ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಕಲ್ಪಿಸಿಕೊಡುವಂತೆ ಈ ಮೂಲಕ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಿ ಟಿ ಸೆಬಾಸ್ಟಿನ್ , ಗ್ರಾಮ ಪಂಚಾಯತ್ ಸದಸ್ಯರಾದ ನಿತ್ಯಾನಂದ ರೈ , ಪ್ರೇಮ ಬಿ ಎಸ್. ಮತ್ತು ಊರ ಪ್ರಮುಖರಾದ ಶ್ರೀಧರ್ ರಾವ್, ಶರತ್ ಮೂಡಾರು, ಅಶೋಕ್ ಭಟ್ ಕಾಯಡ, ಜಯವರ್ಮ ಜೈನ್ ಶಿಬರಾಜೆ, ಕೇಶವ ಗೌಡ ಮಲ್ಲಜಾಲು ಉಪಸ್ಥಿತರಿದ್ದರು.

Related posts

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!