25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

ಧರ್ಮಸ್ಥಳ – ಕಾರ್ಯಾತಡ್ಕ – ಶಿಶಿಲ ರೂಟ್ ಬಸ್ ಹಾಗೂ ಕಾರ್ಯಾತಡ್ಕ – ಶಿಬರಾಜೆ ಪಾದೆ – ಮುದ್ದಿಗೆ -ಕೊಕ್ಕಡ -ಉಪ್ಪಿನಂಗಡಿ -ಪುತ್ತೂರು ಹೊಸದಾಗಿ ರೂಟ್ ಬಸ್ ಪ್ರಾರಂಬಿಸುವಂತೆ ಜು. 11 ರಂದು ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯವರು ಧರ್ಮಸ್ಥಳ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.

ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಅನೇಕ ಉದ್ಯೋಗಸ್ಥರು, ಸಾರ್ವಜನಿಕರು ಪ್ರಯಾಣ ಮಾಡುತ್ತಿದ್ದು ಖಾಸಗಿ ಬಸ್ ಹಾಗೂ ಇನ್ನಿತ್ತರ ವಾಹನಗಳನ್ನು ಅವಲಂಬಿತರಾಗಿದ್ದಾರೆ. ಸದರಿ ಮಾರ್ಗಕ್ಕೆ ಬೆಳಿಗ್ಗೆ ಮತ್ತು ಮದ್ಯಾಹ್ನ ಹಾಗೂ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಕಲ್ಪಿಸಿಕೊಡುವಂತೆ ಈ ಮೂಲಕ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಿ ಟಿ ಸೆಬಾಸ್ಟಿನ್ , ಗ್ರಾಮ ಪಂಚಾಯತ್ ಸದಸ್ಯರಾದ ನಿತ್ಯಾನಂದ ರೈ , ಪ್ರೇಮ ಬಿ ಎಸ್. ಮತ್ತು ಊರ ಪ್ರಮುಖರಾದ ಶ್ರೀಧರ್ ರಾವ್, ಶರತ್ ಮೂಡಾರು, ಅಶೋಕ್ ಭಟ್ ಕಾಯಡ, ಜಯವರ್ಮ ಜೈನ್ ಶಿಬರಾಜೆ, ಕೇಶವ ಗೌಡ ಮಲ್ಲಜಾಲು ಉಪಸ್ಥಿತರಿದ್ದರು.

Related posts

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!