ನಡ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಜು.೯ರಂದು ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.
ಉಜಿರೆಯ ದಂತ ವೈದ್ಯ ಡಾ| ಎಂ.ಎಂ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಅತಿ ದೊಡ್ಡ ಶಕ್ತಿ ಎಂದರೆ ಯುವಶಕ್ತಿ. ಈ ಯುವಶಕ್ತಿಯನ್ನು ನಾವು ಸರಿಯಾಗಿ ಬಳಸಿಕೊಂಡರೆ ನಮಗೆ ಗೆಲುವು ಸಾಧ್ಯ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಕ್ಕಳಿಗೆ ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಪ್ರಭಾಕರ ಮಯ್ಯ, ಕೊಯ್ಯೂರು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮೋಹನ ಗೌಡ ಉಪಸ್ಥಿತರಿದ್ದರು.
ಪ್ರಾಚಾರ್ಯ ಚಂದ್ರಶೇಖರ್ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಹೂ ಕೊಟ್ಟು ಗೌರವಿಸಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ದೇವಾಡಿಗ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ. ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಪ್ರಾಸ್ತಾವಿಸಿದರು. ಶ್ರೀಮತಿ ಸವಿತಾ ಧನ್ಯವಾದಗೈದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿವಿ ಕಾರ್ಯಕ್ರಮ ನಿರೂಪಿಸಿದರು.











