22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

ನಡ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಜು.೯ರಂದು ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.

ಉಜಿರೆಯ ದಂತ ವೈದ್ಯ ಡಾ| ಎಂ.ಎಂ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಅತಿ ದೊಡ್ಡ ಶಕ್ತಿ ಎಂದರೆ ಯುವಶಕ್ತಿ. ಈ ಯುವಶಕ್ತಿಯನ್ನು ನಾವು ಸರಿಯಾಗಿ ಬಳಸಿಕೊಂಡರೆ ನಮಗೆ ಗೆಲುವು ಸಾಧ್ಯ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಕ್ಕಳಿಗೆ ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಪ್ರಭಾಕರ ಮಯ್ಯ, ಕೊಯ್ಯೂರು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮೋಹನ ಗೌಡ ಉಪಸ್ಥಿತರಿದ್ದರು.

ಪ್ರಾಚಾರ್ಯ ಚಂದ್ರಶೇಖರ್ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಹೂ ಕೊಟ್ಟು ಗೌರವಿಸಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ದೇವಾಡಿಗ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ. ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಪ್ರಾಸ್ತಾವಿಸಿದರು. ಶ್ರೀಮತಿ ಸವಿತಾ ಧನ್ಯವಾದಗೈದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿವಿ ಕಾರ್ಯಕ್ರಮ ನಿರೂಪಿಸಿದರು.

Related posts

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!