July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

ವೇಣೂರು : ಐತಿಹಾಸಿಕ ಮಹತ್ತ್ವದ ವೇಣೂರಿನ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ 25 ವರ್ಷ ತುಂಬುವ ಸಂಭ್ರಮ. ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆಸಿಕೊಂಡು ಬರುತ್ತಿರುವ ಗಣೇಶೋತ್ಸವವನ್ನು ಈ ಬಾರಿ ಇನ್ನಷ್ಟು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ. ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ ಲಾಂಛನವನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅನಾವರಣಗೊಳಿಸಿದರು.

ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ಕೆ.ಶಿವರಾಮ ಹೆಗ್ಡೆ, ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ.ಶಾಂತಿ ಪ್ರಸಾದ್, ಭಾಸ್ಕರ ಪೈ, ಅಧ್ಯಕ್ಷರಾದ ಜಗದೀಶ್ ಡಿ ಕೆ, ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ವಿ ಎಸ್ ಜಯರಾಜ್, ಸದಸ್ಯರಾದ ಪ್ರಸನ್ನ ಹೆಬ್ಬಾರ್, ಶ್ರೀಕಾಂತ ಉಡುಪ ಹೇಮಂತ್ ಕುಮಾರ್, ಅರುಣ್ ಕುಮಾರ್ ಐಂದಲ್ಕೆ, ಸುದತ್ ಜೈನ್,, ಪ್ರಮೋದ್ ಕುಮಾರ್ ಜೈನ್, ಗಂಗಾಧರ ಆಚಾರ್ಯ, ಪ್ರಶಾಂತ ನಾಯಕ್, ಸದಾಶಿವ ಭಂಡಾರಿ, ಪ್ರಕಾಶ್ ಚಂದ್ರ ಹೆಗ್ಡೆ,ನಿರಂಜನ್ ಕೆ ಎಸ್, ಪ್ರಸಾದ ಜೈನ್, ಶ್ರೀ ಸದಾನಂದ ‘ ಬ್ರಹ್ಮ ಶ್ರೀ ‘, ಸೀತಾರಾಮ ಆಚಾರ್ಯ, ಗಿರೀಶ್ ಕೆ ಎಸ್, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮ್ಯಾನೇಜರ್ ಶಾಂತಿ ರಾಜ್ ಜೈನ್ ಹಾಗೂ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕ ಶಿಕ್ಷಕಿಯರು ಪಾಲ್ಗೊಂಡರು.

Related posts

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!