23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya
error: Content is protected !!