23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

ಕೊಯೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಗುರು ಪೂರ್ಣಿಮೆಯ ಭಾಗವಾಗಿ ಕೊಯ್ಯೂರು ಗ್ರಾಮದ 157ನೇ ಬೂತ್ ನಲ್ಲಿ ಯಕ್ಷಗಾನ ಗುರುಗಳಾದ ವಿಶ್ವನಾಥ ಗೌಡ ಪಾಂಬೇಲು ಅವರಿಗೆ ಗುರುಪೂರ್ಣಿಮೆ ದಿನ ಗುರುವಂದನೆ ಕಾರ್ಯಕ್ರಮ ಜು. 10ರಂದು ನಡೆಯಿತು.

ಮೊದಲ ಬಾರಿಗೆ 1986 ರಲ್ಲಿ ಧರ್ಮಸ್ಥಳದ ಲಲಿತಾ ಕಲಾಭವನದಲ್ಲಿ ಯಕ್ಷಗಾನ ಶಿಕ್ಷಣ ಪೂರ್ಣಗೊಳಿಸಿ, ನಂತರ 2004ರಿಂದ ಸ್ಥಳೀಯ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಾ ತಮ್ಮ ಯಕ್ಷ ಸೇವೆಯನ್ನು ಪ್ರಾರಂಭಿಸಿದರು. 2018ರ ಕೊರೊನಾ ಮಹಾಮಾರಿಯವರೆಗೂ ಹಲವಾರು ಮಕ್ಕಳಿಗೆ ಯಕ್ಷ ಗುರುವಾಗಿ ಸೇವೆ ನೀಡುತ್ತಾ ಬಂದಿರುತ್ತಾರೆ. ಈ ಎಲ್ಲಾ ಸಂಗತಿಗಳನ್ನೂ ಮನಗೊಂಡು ಇವರು ಗುರು ಪೂರ್ಣಿಮೆಯ ದಿನದಂದು ಕಾರ್ಯಕರ್ತರ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು.

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ತಾರಾನಾಥ ಗೌಡ ಮೇಗಿನಬಜಿಲ, ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಹರೀಶ್ ಗೌಡ ಬಜಿಲ, ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಡೆಂಬುಗ, ಕಾರ್ಯಕರ್ತರಾದ ಮೋಹನದಾಸ್ ಬಜಿಲ, ಶೇಖರ ಗೌಡ ಕೋರಿಯಾರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿ, ಭರತ್ ಡೆಂಬುಗ ವಂದಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya
error: Content is protected !!