23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಗುರುವಾಯನಕೆರೆ: ಅಂಗಡಿಯ ಬದಿಯಲ್ಲಿ ಜಾಹೀರಾತು ಇರಿಸಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿ ಪರಾರಿಯಾದ ಘಟನೆ ಜು.10 ರಂದು ಬೆಳಗ್ಗಿನ ಜಾವ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 10 ರಂದು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಗುರುವಾಯನಕೆರೆಯಲ್ಲಿರುವ ಸದಕತುಲ್ಲಾ ಎಂಬವರಿಗೆ ಸೇರಿದ ಜಿ.ಕೆ.ಸ್ಟೋರ್ ಹೆಸರಿನ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಬ್ಯಾನರ್ ಗೆ ಜುಲೈ 10 ರಂದು ಬೆಳಗ್ಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ಕಿಡಿಗೇಡಿಯೊರ್ವ ಬೆಂಕಿ ಹಚ್ಚಿದ್ದ ಓಡಿಹೋಗಿದ್ದ. ಈ ಬಗ್ಗೆ ಮಾಲೀಕ ಬೆಳಗ್ಗೆ ಅಂಗಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಸಿಕ್ಯಾಮರ ಪರಿಶೀಲನೆ ನಡೆಸಿದಾಗ ಕೃತ್ಯದ ಸಂಪೂರ್ಣ ದೃಶ್ಯ ಸೆರೆಯಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅಂಗಡಿ ಮಾಲೀಕ ಸದಕತುಲ್ಲಾ ಎಂಬವರು ದೂರು ನೀಡಿದ್ದು. ಪೊಲೀಸರು ಪ್ರಕರಣ ದಾಖಲಿಸಿದ್ದರು.ಬೆಂಕಿ ಹಚ್ಚಿದ ಕಿಡಿಗೇಡಿ ಆರೋಪಿ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಉಮೇಶ್ ಬಂಗೇರ(29) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಜುಲೈ 10 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಹಿಂದೆ ಆರೋಪಿ ಹೊಟೇಲ್ ನಡೆಸುತ್ತಿದ್ದು‌‌. ಇದೆ ಅಂಗಡಿಯಿಂದ 38 ಸಾವಿರದ ದಿನಸಿಗಳನ್ನು ಖರೀದಿಸಿದ ಹಣ ಬಾಕಿ ಇತ್ತು. ಈ ಹಣವನ್ನು ಅಂಗಡಿ ಮಾಲೀಕ ಜುಲೈ 9 ರಂದು ಒಳ್ಳೆಯ ರೀತಿಯಲ್ಲಿ ಕೊಡುವಂತೆ ಕರೆ ಮಾಡಿ ಮನವಿ ಮಾಡಿದ್ದರು.

ಈ ವಿಚಾರದಿಂದ ಕೋಪಗೊಂಡು ಬೆಂಕಿ ಹಚ್ಚಿರುವುದು ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ. ಬೆಂಕಿ ಹಚ್ಚಿದಾಗ ಪಕ್ಕದಲ್ಲಿ ಕಾರು ನಿಲ್ಲಿಸಲಾಗಿದ್ದು ಅದಲ್ಲದೆ ಅಂಗಡಿಗೆ ಬೆಂಕಿ ತಗುಲದೆ ಯಾವುದೇ ದೊಡ್ಡ ಅನಾಹುತ ಉಂಟಾಗಿಲ್ಲ ಎಂದು ಮಾಲೀಕ ಸದಕತುಲ್ಲಾ ಹೇಳಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹಾಗೂ ಸಿಬ್ಬಂದಿ ಮತ್ತು ಮಂಗಳೂರು ಎಫ್ಎಸ್ಎಲ್ ವಿಭಾಗದ ಸೋಕೋ ಸಿಬ್ಬಂದಿ ಅರ್ಪಿತಾ, ಕಾವ್ಯಶ್ರೀ, ಸುಮನ್ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
error: Content is protected !!