23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

ಧರ್ಮಸ್ಥಳ – ಕಾರ್ಯಾತಡ್ಕ – ಶಿಶಿಲ ರೂಟ್ ಬಸ್ ಹಾಗೂ ಕಾರ್ಯಾತಡ್ಕ – ಶಿಬರಾಜೆ ಪಾದೆ – ಮುದ್ದಿಗೆ -ಕೊಕ್ಕಡ -ಉಪ್ಪಿನಂಗಡಿ -ಪುತ್ತೂರು ಹೊಸದಾಗಿ ರೂಟ್ ಬಸ್ ಪ್ರಾರಂಬಿಸುವಂತೆ ಜು. 11 ರಂದು ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯವರು ಧರ್ಮಸ್ಥಳ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.

ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಅನೇಕ ಉದ್ಯೋಗಸ್ಥರು, ಸಾರ್ವಜನಿಕರು ಪ್ರಯಾಣ ಮಾಡುತ್ತಿದ್ದು ಖಾಸಗಿ ಬಸ್ ಹಾಗೂ ಇನ್ನಿತ್ತರ ವಾಹನಗಳನ್ನು ಅವಲಂಬಿತರಾಗಿದ್ದಾರೆ. ಸದರಿ ಮಾರ್ಗಕ್ಕೆ ಬೆಳಿಗ್ಗೆ ಮತ್ತು ಮದ್ಯಾಹ್ನ ಹಾಗೂ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಕಲ್ಪಿಸಿಕೊಡುವಂತೆ ಈ ಮೂಲಕ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಿ ಟಿ ಸೆಬಾಸ್ಟಿನ್ , ಗ್ರಾಮ ಪಂಚಾಯತ್ ಸದಸ್ಯರಾದ ನಿತ್ಯಾನಂದ ರೈ , ಪ್ರೇಮ ಬಿ ಎಸ್. ಮತ್ತು ಊರ ಪ್ರಮುಖರಾದ ಶ್ರೀಧರ್ ರಾವ್, ಶರತ್ ಮೂಡಾರು, ಅಶೋಕ್ ಭಟ್ ಕಾಯಡ, ಜಯವರ್ಮ ಜೈನ್ ಶಿಬರಾಜೆ, ಕೇಶವ ಗೌಡ ಮಲ್ಲಜಾಲು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಾರದ ಸಂತೆಗೆ ಸ್ಥಳಾವಕಾಶ ಕೊರತೆ: ವ್ಯಾಪಾರಿಗಳು ವಾಪಾಸು

Suddi Udaya
error: Content is protected !!